Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:13 - ಕನ್ನಡ ಸಮಕಾಲಿಕ ಅನುವಾದ

13 ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:13
11 ತಿಳಿವುಗಳ ಹೋಲಿಕೆ  

ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.


ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.


ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು