Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:18 - ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:18
23 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ.


ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.


ಆದರೆ ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ. ಅವರ ಹಟಮಾರಿತನಕ್ಕೆ ಪ್ರತಿಯಾಗಿ, ನಿನ್ನನ್ನು ಹಟವಾದಿಯನ್ನಾಗಿಸುವೆನು.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.


ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.


ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.


ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.


“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.


ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು