Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:2 - ಕನ್ನಡ ಸಮಕಾಲಿಕ ಅನುವಾದ

2 ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲೀಯನು ಅಹಾಬನನ್ನು ನೋಡುವದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹುಘೋರವಾಗಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:2
16 ತಿಳಿವುಗಳ ಹೋಲಿಕೆ  

ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.


ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.


ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು