Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:25
4 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.


ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.


ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.


“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು