Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:39 - ಕನ್ನಡ ಸಮಕಾಲಿಕ ಅನುವಾದ

39 ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:39
19 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.


ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?


ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು