Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:42 - ಕನ್ನಡ ಸಮಕಾಲಿಕ ಅನುವಾದ

42 ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:42
21 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.


ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.


ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,


ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.


ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು.


ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.


ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.


ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು