Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:5 - ಕನ್ನಡ ಸಮಕಾಲಿಕ ಅನುವಾದ

5 ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:5
11 ತಿಳಿವುಗಳ ಹೋಲಿಕೆ  

ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.


ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು