Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:19 - ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:19
14 ತಿಳಿವುಗಳ ಹೋಲಿಕೆ  

ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಆಗ ಅವನು, “ಅವನ ರೂಪ ಹೇಗಿದೆ?” ಎಂದು ಅವಳನ್ನು ಕೇಳಿದನು. ಅವಳು, “ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನುಷ್ಯನು ಬರುತ್ತಿದ್ದಾನೆ,” ಎಂದಳು. ಅವನು ಸಮುಯೇಲನು ಎಂದು ಸೌಲನು ತಿಳಿದುಕೊಂಡು, ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.


ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.


ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು