Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:8
15 ತಿಳಿವುಗಳ ಹೋಲಿಕೆ  

ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.


ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.


ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.


ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು