Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:28
8 ತಿಳಿವುಗಳ ಹೋಲಿಕೆ  

ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.


ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.


ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.


ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.


ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು