Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:37 - ಕನ್ನಡ ಸಮಕಾಲಿಕ ಅನುವಾದ

37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:37
13 ತಿಳಿವುಗಳ ಹೋಲಿಕೆ  

ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.


ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


“ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.


ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.


ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.


ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.


ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು