Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:42 - ಕನ್ನಡ ಸಮಕಾಲಿಕ ಅನುವಾದ

42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣತೆಗೆದುಕೊಂಡೆನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸೊಲೊಮೋನನು ಶಿಮ್ಮಿಯನ್ನು ಕರೆಯಿಸಿ, “ನೀನು ಜೆರುಸಲೇಮನ್ನು ಬಿಟ್ಟುಹೋದರೆ ಮರಣಶಿಕ್ಷೆಯಾಗುವುದೆಂದು ನಾನು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದೆನು. ನೀನು ಬೇರೆಲ್ಲಾದರೂ ಹೋದರೆ ಅದು ನಿನ್ನ ಸ್ವಂತ ತಪ್ಪಾಗುವುದೆಂದೂ ನಿನ್ನನ್ನು ಕೊಲ್ಲಲಾಗುವುದೆಂದೂ ನಾನು ನಿನ್ನನ್ನು ಎಚ್ಚರಿಸಿದ್ದೆನು. ಅದಕ್ಕೆ ನೀನೂ ಒಪ್ಪಿಗೆ ನೀಡಿ ನನಗೆ ವಿಧೇಯನಾಗಿರುವುದಾಗಿ ತಿಳಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:42
6 ತಿಳಿವುಗಳ ಹೋಲಿಕೆ  

“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.


ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು