Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:6 - ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೇನು ಮಾಡಬೇಕೆಂಬದು ಬುದ್ಧಿವಂತನಾದ ನಿನಗೆ ಗೊತ್ತುಂಟಲ್ಲಾ; ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:6
18 ತಿಳಿವುಗಳ ಹೋಲಿಕೆ  

ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.


ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.


ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು