Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:12 - ಕನ್ನಡ ಸಮಕಾಲಿಕ ಅನುವಾದ

12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:12
10 ತಿಳಿವುಗಳ ಹೋಲಿಕೆ  

ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.


‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು