Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:20 - ಕನ್ನಡ ಸಮಕಾಲಿಕ ಅನುವಾದ

20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದರಿದನು; ಅರಾಮ್ಯರು ಓಡಿಹೋಗಲು ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಕೆಲವು ಮಂದಿ ರಾಹುತರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:20
15 ತಿಳಿವುಗಳ ಹೋಲಿಕೆ  

ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.


ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,


ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.


ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.


ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು