Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:6 - ಕನ್ನಡ ಸಮಕಾಲಿಕ ಅನುವಾದ

6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬದಾಗಿ ಬೆನ್ಹದದನು ಅನ್ನುತ್ತಾನೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:6
13 ತಿಳಿವುಗಳ ಹೋಲಿಕೆ  

ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.


ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.


ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?


ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು