Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:14 - ಕನ್ನಡ ಸಮಕಾಲಿಕ ಅನುವಾದ

14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:14
6 ತಿಳಿವುಗಳ ಹೋಲಿಕೆ  

ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು.


ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು