Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:19 - ಕನ್ನಡ ಸಮಕಾಲಿಕ ಅನುವಾದ

19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:19
23 ತಿಳಿವುಗಳ ಹೋಲಿಕೆ  

ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು.


ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯದಿಂದ ಸ್ಥಾಪಿಸುವವನಿಗೆ ಕಷ್ಟ!


ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.


ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು.


ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,


ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.”


ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.


ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು