Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:2 - ಕನ್ನಡ ಸಮಕಾಲಿಕ ಅನುವಾದ

2 ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಹಾಬನು ನಾಬೋತನಿಗೆ - ನಿನ್ನ ದ್ರಾಕ್ಷೇತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:2
18 ತಿಳಿವುಗಳ ಹೋಲಿಕೆ  

ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.


ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.


ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.


ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


“ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.


ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.


ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.


ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು