Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:7
14 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.


ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.


ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.


ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು, ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು ಅವನಿಗೆ,


ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು.


ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.


ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು