Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:8 - ಕನ್ನಡ ಸಮಕಾಲಿಕ ಅನುವಾದ

8 ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:8
18 ತಿಳಿವುಗಳ ಹೋಲಿಕೆ  

ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:


ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.


ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.


ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.


ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.


ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.


ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು