Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:13
12 ತಿಳಿವುಗಳ ಹೋಲಿಕೆ  

ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು