Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:28 - ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:28
15 ತಿಳಿವುಗಳ ಹೋಲಿಕೆ  

ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ.


ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.


ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.


ಅದಕ್ಕೆ ಎಲೀಯನು ಪ್ರಧಾನನಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.


ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು