Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:3 - ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:3
10 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.


ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.


ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು.


ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.


ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.


ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು