Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:34 - ಕನ್ನಡ ಸಮಕಾಲಿಕ ಅನುವಾದ

34 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:34
11 ತಿಳಿವುಗಳ ಹೋಲಿಕೆ  

ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.


ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.


ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.


ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.


ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.


ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು