Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋಷಾಫಾಟನನ್ನು - ಯುದ್ಧಮಾಡುವದಕ್ಕಾಗಿ ನೀನೂ ನಮ್ಮ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:4
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.


ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.


ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.


ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು