Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:14 - ಕನ್ನಡ ಸಮಕಾಲಿಕ ಅನುವಾದ

14 ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:14
25 ತಿಳಿವುಗಳ ಹೋಲಿಕೆ  

ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.


ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


“ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.


ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.


ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು