Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:13 - ಕನ್ನಡ ಸಮಕಾಲಿಕ ಅನುವಾದ

13 ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:13
14 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.


ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.


ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.


ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.


ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.


ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು.


ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.


ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು