Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ತಾನು ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:12
12 ತಿಳಿವುಗಳ ಹೋಲಿಕೆ  

ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.


ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.


ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.


ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.


ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:


ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು