Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:4
11 ತಿಳಿವುಗಳ ಹೋಲಿಕೆ  

ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?


ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.


ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.


ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು.


ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು