Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:5
15 ತಿಳಿವುಗಳ ಹೋಲಿಕೆ  

ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.


ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.


ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


“ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.


“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು