Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:9
14 ತಿಳಿವುಗಳ ಹೋಲಿಕೆ  

“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.


ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.


ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.


ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.


ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು