Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:38 - ಕನ್ನಡ ಸಮಕಾಲಿಕ ಅನುವಾದ

38 ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇದಲ್ಲದೆ ಅವನು ನಾಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:38
12 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.


ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು.


ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.


ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು