Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:1
25 ತಿಳಿವುಗಳ ಹೋಲಿಕೆ  

ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.


ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.


ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.


ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.


ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.


ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.


ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.


ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ.


ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು