Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:11
22 ತಿಳಿವುಗಳ ಹೋಲಿಕೆ  

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.


ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.


ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.


ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.


ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.


ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು.


ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು