Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:30 - ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:30
26 ತಿಳಿವುಗಳ ಹೋಲಿಕೆ  

ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.


ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,


ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.


ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.


ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು