Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:35 - ಕನ್ನಡ ಸಮಕಾಲಿಕ ಅನುವಾದ

35 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:35
30 ತಿಳಿವುಗಳ ಹೋಲಿಕೆ  

“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.


ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,


“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.


ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.


ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.


ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು