Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:43 - ಕನ್ನಡ ಸಮಕಾಲಿಕ ಅನುವಾದ

43 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:43
19 ತಿಳಿವುಗಳ ಹೋಲಿಕೆ  

ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.


ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು