Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:9 - ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:9
25 ತಿಳಿವುಗಳ ಹೋಲಿಕೆ  

ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.


ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.


ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು