Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:21 - ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:21
23 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.


ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.


ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.


ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.


ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.


ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,


ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ


ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು