Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:8
22 ತಿಳಿವುಗಳ ಹೋಲಿಕೆ  

ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.


“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’


ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು