Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚಿ ಮರ್ಜಿ ಸಾರ್ಕೆ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ಕ್ ಮನುನ್ ಬಲ್ವುಲ್ಲೊ ಪಾವ್ಲು ಅನಿ ವಿಶ್ವಾಸಾತ್ ಹೊತ್ತೊ ಅಮ್ಚೊ ಭಾವ್ ಸೊಸ್ತೆನಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:1
28 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು