Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ಪ್ರಿಯರೇ, ಖ್ಲೋಯೆಯ ಮನೆಯ ಕೆಲವರು, ನಿಮ್ಮೊಳಗೆ ಜಗಳಗಳುಂಟೆಂದು ನನಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಭಾವಾನು ಅನಿ ಭೆನಿಯಾನು ತುಮ್ಚ್ಯಾ ಮದ್ದಿ ನ್ಯಾಯ್ ಝಗ್ಡೆ ಉಟ್ಲ್ಯಾತ್ ಮನುನ್ ಖ್ಲೊಯೆಚ್ಯಾ ಘರ್‍ಚ್ಯಾ ಲೊಕಾಂಚ್ಯಾ ವೈನಾ ಮಾಕಾ ಕಳ್ಳಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:11
19 ತಿಳಿವುಗಳ ಹೋಲಿಕೆ  

ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.


ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.


ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.


ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು