Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ದೆವಾನ್ ಎಚುನ್ ಕಾಡಲ್ಲ್ಯಾಕ್ನಿ, ಜುದೆವಾಕ್ನಿ ತಸೆಚ್ ಜುದೆವ್ ನ್ಹಯ್ ಹೊತ್ಲ್ಯಾಕ್ನಿ ಕ್ರಿಸ್ತುಚ್ ದೆವಾಚೆ ಬಳ್ ಅನಿ ದೆವಾಚೆ ಶಾನ್‍ಪಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:24
14 ತಿಳಿವುಗಳ ಹೋಲಿಕೆ  

ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು