Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:26 - ಕನ್ನಡ ಸಮಕಾಲಿಕ ಅನುವಾದ

26 ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅತ್ತಾ ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್‍ ತುಮ್ಕಾ ಬಲ್ವುತಾನಾ ತುಮಿ ಖೈ ಹೊತ್ತ್ಯಾಶಿ ಮನ್ತಲೆ ಯಾದ್ ಕರಾ, ಮಾನ್ಸಾಚ್ಯಾ ನದ್ರೆ ಪರ್‍ಕಾರ್ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಲೈ ಶಾನೆ, ನಾಹೊಲ್ಯಾರ್ ಘಟ್ಮುಟ್, ನಾಹೊಲ್ಯಾರ್, ಸಮಾಜಾತ್ ಮೊಟ್ಯಾ ಮೊಟ್ಯಾ ಜಾಗ್ಯಾ ವೈನಿ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:26
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.


ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.


ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.


ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ; ಆದರೆ ತಾವೇ ಜ್ಞಾನಿಗಳೆಂದು ತಿಳಿದಿರುವವರು ದೇವರು ಲಕ್ಷಿಸುವುದಿಲ್ಲ.”


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು