Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:19 - ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ಮನ್ತಾನಾ ಮಿಯಾ ಕಾಯ್ ಸಾಂಗುಕ್ ಬಗುಕ್ ಲಾಗ್ಲಾ? ಮುರ್ತಿಯಾಕ್ನಿ ಭೆಟ್ವಲ್ಲೆ ಖಾನ್ ಎಕ್ ಖರಿ ಬಲಿ ಮನುನ್ ಮನ್ತಾ ಕಾಯ್? ನಾ ಹೊಲ್ಯಾರ್ ಎಕ್ ಮುರ್ತಿ ಖರೊ ದೆವ್ ಮನುನ್ ಮನ್ತಾ? ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:19
10 ತಿಳಿವುಗಳ ಹೋಲಿಕೆ  

ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು