Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:22 - ಕನ್ನಡ ಸಮಕಾಲಿಕ ಅನುವಾದ

22 ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮಿ ಧನಿಯಾಕ್ ರಾಗ್ ಯೆಯ್ ಸಾರ್ಕೆ ಚಿಡ್ವುಲಾವ್ ಕಾಯ್? ಅಮಿ ಕಾಯ್ ತೆಚ್ಯಾನ್ಬಿ ಘಟ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:22
18 ತಿಳಿವುಗಳ ಹೋಲಿಕೆ  

ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.


ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.


ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.


ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು.


ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು