Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:16 - ಕನ್ನಡ ಸಮಕಾಲಿಕ ಅನುವಾದ

16 ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಹ್ಯಾ ವಿಶಯಾತ್ ತುಮ್ಚ್ಯಾತ್ಲೊ ಕೊನ್ ಬಿ ತಕ್ರಾರ್ ಕರುಕ್ ರ್‍ಹಾತಾ ಜಾಲ್ಯಾರ್, ಮಿಯಾ ತೆಕಾ ಎವ್ಡೆಚ್ ಸಾಂಗ್ತಾ ಅಮ್ಚ್ಯಾ ಮದ್ದಿ ಹೊಂವ್ದಿತ್, ದೆವಾಚ್ಯಾ ಲೊಕಾಚ್ಯಾ ತಾಂಡ್ಯಾತ್ನಿ ಹೊಂವ್ದಿತ್ ದುಸ್ರಿ ರುಡಾ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:16
12 ತಿಳಿವುಗಳ ಹೋಲಿಕೆ  

ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.


ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?


ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ.


ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು