Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:23 - ಕನ್ನಡ ಸಮಕಾಲಿಕ ಅನುವಾದ

23 ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆ ಕಾಯ್ ಧನಿಯಾಕ್ನಾ ಮಿಯಾ ಘೆಟ್ಲಾ ತೆ ಮಿಯಾ ತುಮ್ಕಾ ಸಾಂಗುನ್ ದಿಲಾ. ತೆ ಕಾಯ್ ಮಟ್ಲ್ಯಾರ್, ಧನಿಯಾ ಜೆಜುಕ್ ದುಸ್ರ್ಯಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊಲೆ, ತ್ಯಾ ದಿಸ್ ರಾಚ್ಚೆ ಭಾಕ್ರಿ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:23
17 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.


“ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.


ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?


ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು