Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:26 - ಕನ್ನಡ ಸಮಕಾಲಿಕ ಅನುವಾದ

26 ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್ ಕವ್ಡೆಂದಾ ತುಮಿ ಹಿ ಭಾಕ್ರಿ ಖಾತ್ಯಾಶಿ ಅನಿ ಹ್ಯಾ ಆಯ್ದಾನಾತ್ಲೆ ಫಿತ್ಯಾಶಿ ತವ್ದೆಂದಾ ಧನಿಯಾಚೆ ಮರಾನ್ ತೊ ಯೆಯ್‍ ಪತರ್ ತುಮಿ ಪ್ರಚಾರ್ ಕರ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:26
16 ತಿಳಿವುಗಳ ಹೋಲಿಕೆ  

“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು